Monday, May 6, 2024
spot_imgspot_img
spot_imgspot_img

ಪುತ್ತೂರು: ಕೈಕೂಟದಲ್ಲಿ “ಕೋಲ್ಡ್ ವಾರ್” ; ಯುವ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬ್ಲಾಕ್‌ ಕಾಂಗ್ರೆಸ್ ತಡೆ

- Advertisement -G L Acharya panikkar
- Advertisement -

ಪುತ್ತೂರು: ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬ್ಲಾಕ್‌ ಕಾಂಗ್ರೆಸ್ ತಡೆ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ರವರು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ, ನಾಯಕರ ಹಾಗೂ ಕಾರ್ಯಕರ್ತರ ಸಭೆ ಹಸ್ತಲಾಘವ ವನ್ನು ರದ್ದುಪಡಿಸುವಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ರವರು ಸೂಚನೆ ನೀಡಿದ್ದಾರೆ.

ಪಕ್ಷದ ಕಾರ್ಯಕರ್ತರ, ಜನಪ್ರತಿನಿಧಿಗಳ ಹಾಗೂ ನಾಯಕರ ಸಭೆಯನ್ನು ಹಸ್ತಲಾಘವ’ ಎಂಬ ಹೆಸರಿನಲ್ಲಿ ಕರೆದಿದ್ದು, ಪಕ್ಷದ ಕಾರ್ಯಕರ್ತರ, ಜನಪ್ರತಿನಿಧಿಗಳ ಹಾಗೂ ನಾಯಕರ ಸಭೆ ಕರೆಯುವುದಕ್ಕೆ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಅದರ ಉನ್ನತ ಸಮಿತಿಗಳಿಗೆ ಮಾತ್ರ ಅವಕಾಶವಿದ್ದು, ಯುವ ಕಾಂಗ್ರೆಸ್ ಈ ಸಭೆಯನ್ನು ಕರೆದಿರುವುದು ತಮ್ಮ ವ್ಯಾಪ್ತಿಯನ್ನು ಮೀರಿ ಕಾರ್ಯನಿರ್ವಹಿಸುವುದಾಗಿದೆ ಮತ್ತು ಇದು ಪಕ್ಷದ ನಡವಳಿಕೆ ಮತ್ತು ನಿಯಮಗಳ ಉಲ್ಲಂಘನೆಯಾಗಿರುತ್ತದೆ ಆದರಿಂದ ಹಸ್ತಲಾಘವ’ ಸಭೆಯನ್ನು ರದ್ದು ಪಡಿಸಬೇಕೆಂದು ಸೂಚನಾ ಪತ್ರದಲ್ಲಿ ಸೂಚಿಸಿದ್ದಾರೆ.

ಯುವ ಕಾಂಗ್ರೆಸ್ ಪರಿಧಿಯಲ್ಲಿ ಬರುವ ಎಲ್ಲಾ ಕಾರ್ಯಕ್ರಮವನ್ನು ಬ್ಲಾಕ್‌ ಕಾಂಗ್ರೆಸ್ ಜೊತೆ ಚರ್ಚಿಸಿ ಕಾರ್ಯರೂಪಕ್ಕೆ ತರುವಲ್ಲಿ ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಲು ಬದ್ಧರಾಗಿರುತ್ತೇವೆ ಎಂದು ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷರು ತಿಳಿಸಿದ್ದು, ಸೂಚನಾ ಪ್ರತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಡಿಸಿಸಿ ಅಧ್ಯಕ್ಷರಿಗೆ, ಕೆಪಿಸಿಸಿ ಅಧ್ಯಕ್ಷರಿಗೆ, ಯುವ ಕಾಂಗ್ರೆಸ್ ಅಧ್ಯಕ್ಷರಿಗೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ, ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!