ಪುತ್ತೂರು: ಮಾದಕ ದ್ರವ್ಯ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀ ಕಾಂತ್ ರಾಥೋ ಡ್ ಅವರು ಬಂಧಿಸಿದ ಘಟನೆ ನಡೆದಿದೆ.
ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀ ಕಾಂತ್ ರಾಥೋಡ್ ಮತ್ತು ಸಿಬ್ಬಂ ದಿಗಳು ರೌಂಡ್ಸ್ ಕರ್ತವ್ಯ ದಲ್ಲಿರುವಾಗ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯ ಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ ಸಾರ್ವಜನಿಕರನ್ನು ಉದ್ದೇ ಶಿಸಿ ಹೀನಾಯವಾಗಿ ಮಾತನಾಡುತ್ತಾ ತೊಂದರೆ ನೀಡುತ್ತಿರುವುದಾಗಿ ಬಂದ ಮಾಹಿತಿ ಪ್ರಕಾರ ಅಲ್ಲಿಗೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ಮಾದಕ ವಸ್ತು ಸೇವಿಸಿದ ಕುರಿತು ಸಂಶಯದ ಮೇರೆಗೆ ಆತನನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಮುಂದೆ ಹಾಜರುಪಡಿಸಿದಾಗ ಆತ ಗಾಂಜಾ ಸೇವಿಸಿರುವ ಕುರಿತು ವೈದ್ಯಾಧಿಕಾರಿಗಳು ದೃಢಪತ್ರ ನೀಡಿದ್ದರು. ಹಾಗಾಗಿ ಆರೋಪಿ ಉಮ್ಮರ್ ಫಾರೂಖ್ ಅವರ ವಿರುದ್ದ ಪೊಲೀಸರು ಪ್ರ ಕರಣ ದಾಖಲಿಸಿದ್ದಾರೆ.