Friday, April 26, 2024
spot_imgspot_img
spot_imgspot_img

ಪುತ್ತೂರು: ಚನ್ನರಾಯಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ದೇವಿಪ್ರಸಾದ್ ಶೆಟ್ಟಿ ದಾರುಣ ಸಾವು..! ಪತಿಯ ಸಾವಿನ ಮರುದಿನವೇ ಗಂಡು ಮಗು ಜನನ

- Advertisement -G L Acharya panikkar
- Advertisement -
vtv vitla

ಪುತ್ತೂರು: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಜ.14 ರಂದು ನಡೆದ ಅಪಘಾತದಲ್ಲಿ ಈಶ್ವರಮಂಗಲ ಬಂಟಕಲ್ಲು ನಿವಾಸಿ ದೇವಿಪ್ರಸಾದ್ ಶೆಟ್ಟಿ(33) ರವರ ಪತ್ನಿ ಜ.15 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚನ್ನರಾಯಪಟ್ಟಣದಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿಟ್ಲ ಮೂಲದ ಹಾಗೂ ಈಶ್ವರ ಮಂಗಲದ ನಿವಾಸಿಗಳು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಚೆನ್ನರಾಯಪಟ್ಟಣ: ಟಿಪ್ಪರ್ ಹಾಗೂ ಆಲ್ಟೋ ಕಾರು ಡಿಕ್ಕಿ; ಪುತ್ತೂರು, ವಿಟ್ಲ ಮೂಲದ ಇಬ್ಬರು ದಾರುಣ ಸಾವು, ಓರ್ವ ಗಂಭೀರ..!

ಅಪಘಾತದಲ್ಲಿ ಮೃತಪಟ್ಟಿದ್ದ ದೇವಿಪ್ರಸಾದ್ ಶೆಟ್ಟಿಯವರ ಮೃತದೇಹವನ್ನು ಜ.14 ರಂದು ರಾತ್ರಿಯ ಚೆನ್ನರಾಯಪಟ್ಟಣದಿಂದ ತಂದು, ಮೃತರ ಪತ್ನಿ ಅಕ್ಷತಾ ಹೆರಿಗೆಗಾಗಿ ದಾಖಲಾಗಿದ್ದ ಕೋಟೆಶ್ವರ ಆಸ್ಪತ್ರೆಗೆ ಕೊಂಡೊಯ್ದು ಅವರಿಗೆ ಮುಖದರ್ಶನ ಮಾಡಿಸಲಾಗಿತ್ತು. ಪತಿಯ ಅಕಾಲಿಕ ಸಾವಿನಿಂದಾಗಿ ದುಃಖದ ಮಡುವಿನಲ್ಲಿ ಮುಳುಗಿದ್ದ ಅಕ್ಷತಾ ರವರು ಜ.15 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!