- Advertisement -
- Advertisement -
ಪುತ್ತೂರು: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಜ.14 ರಂದು ನಡೆದ ಅಪಘಾತದಲ್ಲಿ ಈಶ್ವರಮಂಗಲ ಬಂಟಕಲ್ಲು ನಿವಾಸಿ ದೇವಿಪ್ರಸಾದ್ ಶೆಟ್ಟಿ(33) ರವರ ಪತ್ನಿ ಜ.15 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚನ್ನರಾಯಪಟ್ಟಣದಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿಟ್ಲ ಮೂಲದ ಹಾಗೂ ಈಶ್ವರ ಮಂಗಲದ ನಿವಾಸಿಗಳು ಸಾವನ್ನಪ್ಪಿದ್ದರು.
ಅಪಘಾತದಲ್ಲಿ ಮೃತಪಟ್ಟಿದ್ದ ದೇವಿಪ್ರಸಾದ್ ಶೆಟ್ಟಿಯವರ ಮೃತದೇಹವನ್ನು ಜ.14 ರಂದು ರಾತ್ರಿಯ ಚೆನ್ನರಾಯಪಟ್ಟಣದಿಂದ ತಂದು, ಮೃತರ ಪತ್ನಿ ಅಕ್ಷತಾ ಹೆರಿಗೆಗಾಗಿ ದಾಖಲಾಗಿದ್ದ ಕೋಟೆಶ್ವರ ಆಸ್ಪತ್ರೆಗೆ ಕೊಂಡೊಯ್ದು ಅವರಿಗೆ ಮುಖದರ್ಶನ ಮಾಡಿಸಲಾಗಿತ್ತು. ಪತಿಯ ಅಕಾಲಿಕ ಸಾವಿನಿಂದಾಗಿ ದುಃಖದ ಮಡುವಿನಲ್ಲಿ ಮುಳುಗಿದ್ದ ಅಕ್ಷತಾ ರವರು ಜ.15 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
- Advertisement -