- Advertisement -
- Advertisement -
ಪುತ್ತೂರು: ಶ್ರೀರಾಮ ಸೇನೆಯ ಮುಖ್ಯಸ್ಥ, ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ರವರು ಸೆ.19 ರಂದು ಪುತ್ತೂರಿಗೆ ಆಗಮಿಸಿದ್ದು, ‘ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್ ಡಾ.ಎಂ.ಕೆ ಪ್ರಸಾದ್ ರವರನ್ನು ಭೇಟಿ ಮಾಡಿದ್ದರು.
ಸೆ.19 ರಂದು ಮಧ್ಯಾಹ್ನ ವೇಳೆ ಪುತ್ತೂರಿಗೆ ಆಗಮಿಸಿದ ಮುತಾಲಿಕ್ ರವರು ಮೊದಲಿಗೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಪತ್ರಿಕಾಗೋಷ್ಠಿ ನಡೆಸಿದರು. ಅನಂತರ ಪ್ರವೀಣ್ ನೆಟ್ಟಾರುರವರ ಮನೆಗೆ ಭೇಟಿ ನೀಡಿದರು. ಬಳಿಕ ಆದರ್ಶ ಆಸ್ಪತ್ರೆಗೆ ಆಗಮಿಸಿ ಡಾ. ಎಂ.ಕೆ. ಪ್ರಸಾದ್ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಹಿಂದೂ ಮುಖಂಡರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Advertisement -