Saturday, May 4, 2024
spot_imgspot_img
spot_imgspot_img

ಪುತ್ತೂರು ತಾಲೂಕಿನ ಆರೋಗ್ಯಧಿಕಾರಿಯಾಗಿ ಡಾ. ಅಶೋಕ್ ಕುಮಾರ್ ರೈ ನೇಮಕ

- Advertisement -G L Acharya panikkar
- Advertisement -

ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳ ಆದೇಶ ಮೇರೆಗೆ ವರ್ಗಾವಣೆಗೊಳಿಸಲಾಗಿದೆ.

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಅರವಳಿಕೆ ತಜ್ಞೆ ಡಾ. ವಿ. ಶ್ವೇತಾ ಅವರನ್ನು ಪುತ್ತೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಾಗೂ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಡಾ. ಅಶೋಕ್ ಕುಮಾರ್ ರೈ ರವರನ್ನು ಪುತ್ತೂರು ತಾಲೂಕು ಆರೋಗ್ಯಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಈ ಮೊದಲು ದೀಪಕ್ ರೈ ರವರು ಪ್ರಭಾರ ನೆಲೆಯಲ್ಲಿ ಪುತ್ತೂರು ತಾಲೂಕು ಆರೋಗ್ಯಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

vtv vitla
- Advertisement -

Related news

error: Content is protected !!