

ಪುತ್ತೂರು: ದರ್ಬೆ ಪೆಟ್ರೋಲ್ ಪಂಪ್ನಲ್ಲಿ ಇನ್ನೋವಾ ಕಾರು ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂದನದಲ್ಲಿದ್ದ 6 ಮಂದಿ ಆರೋಪಿಗಳ ಪೈಕಿ ಓರ್ವನಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹಲ್ಲೆಗೊಳಗಾದ ವ್ಯಕ್ತಿ ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿಯಾಗಿದ್ದು, ಪೈಂಟಿಂಗ್ ವೃತ್ತಿ ಮಾಡುತ್ತಿರುವ ರಾಧಾಕೃಷ್ಣ(44) ಎನ್ನಲಾಗಿದೆ.

ಘಟನೆಯ ವಿವರ:
ಆ.24ರಂದು ರಾತ್ರಿ ದರ್ಬೆ ಜಗನ್ನಾಥ ರೈ ಪೆಟ್ರೋಲ್ ಪಂಪ್ನಲ್ಲಿ ತನ್ನ ಇನ್ನೋವಾ ಕಾರಿಗೆ ಡೀಸೆಲ್ ಹಾಕಿಸಿ ಬಳಿಕ ಟಯರ್ ಗೆ ಗಾಳಿ ತುಂಬಿಸುವ ವೇಳೆ ತಂಡವೊಂದು ಬಂದು ರಾಧಾಕೃಷ್ಣ ಎಂಬುವವರಿಗೆ ಹಲ್ಲೆ ನಡೆಸಿದೆ. ಈ ಘಟನೆಗೆ ಸಂಬಂಧಿಸಿ ನ್ಯಾಯಾಲಯವು 6 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪೈಕಿ ಆಶ್ರಫ್ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆಶ್ರಫ್ ಅವರ ಜಾಮೀನು ಅರ್ಜಿ ಪುರಸ್ಕರಿಸಿ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲ ಅಬ್ದುಲ್ ರಹಿಮಾನ್ ಹಿರೇಬಂಡಾಡಿ ವಾದಿಸಿದರು.


