- Advertisement -
- Advertisement -
ಪುತ್ತೂರು: ದ್ವಿಚಕ್ರ ವಾಹನವೊಂದಕ್ಕೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಸಹ ಸವಾರೆ ಸ್ಥಳದಲ್ಲಿಯೇ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಡ್ರೀಯ ಹೆದ್ದಾರಿ ಉಪ್ಪಿನಂಗಡಿಯ ಪೆರ್ನೆಯಲ್ಲಿ ನಡೆದಿದೆ.
ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ಮಾಲಕ ನೆಕ್ಕಿಲಾಡಿ ನಿವಾಸಿ ಬಾಲಕೃಷ್ಣ ಭಟ್ ಅವರ ಪತ್ನಿ ಪೂರ್ಣಿಮಾ(47) ರವರು ಮೃತಪಟ್ಟವರು.
ಬಾಲಕೃಷ್ಣ ದಂಪತಿ ಪೆರ್ನೆಯಲ್ಲಿರುವ ತಮ್ಮ ತೋಟಕ್ಕೆ ಹೋಗಿ ಅಲ್ಲಿಂದ ದ್ವಿಚಕ್ರ ವಾಹನದಲ್ಲಿ ಹಿಂತಿರುಗುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪತ್ನಿ ಪೂರ್ಣಿಮ ಸ್ಥಳದಲ್ಲಿಯೇ ಮೃತಪಟ್ಟಿದ್ದು , ಗಂಭೀರ ಗಾಯಗೊಂಡ ಬಾಲಕೃಷ್ಣ ಭಟ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
- Advertisement -