- Advertisement -
- Advertisement -
ಪುತ್ತೂರು: ಇಲ್ಲಿನ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿಯಾದ ಘಟನೆ ಸೋಮವಾರದಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಟ್ಯಾಪಿಂಗ್ ಕಾರ್ಮಿಕ ಸೆಲ್ವಂ ಎನ್ನಲಾಗಿದೆ.
ಕೊಲ್ಲಾಜೆ ಕಡೆಯಿಂದ ಬರುತ್ತಿದ್ದ ಜುಪಿಟರ್ ವಾಹನವು ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು,ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸ್ಕೂಟರ್ ಸವಾರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
- Advertisement -