- Advertisement -
- Advertisement -
ಪುತ್ತೂರು: ನಗರಸಭಾ ಸದಸ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಎಂದು ಗುರುತಿಸಲಾಗಿದೆ.
ಶಿವರಾಮ್ ಸಪಲ್ಯರವರು ಊರಮಾಲು ನಿವಾಸಿಯಾಗಿದ್ದು , ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದದ್ದಾರೆನ್ನಲಾಗಿದೆ. ಪತಿಯು ಫೋನ್ ಕರೆ ಸ್ವೀಕರಿಸುತ್ತಿಲ್ಲವೆಂದು ಪತ್ನಿಯು ಹತ್ತಿರದ ಮನೆಯವರ ಹತ್ತಿರ ಮನೆ ಬಳಿ ತೆರಳುವಂತೆ ತಿಳಿಸಿದ್ದು , ಈ ವೇಳೆ ಅವರು ಮನೆ ಬಳಿ ತೆರಳಿ ನೋಡಿದಾಗ ಶಿವರಾಮ್ ನೇಣು ಬಿಗಿದುಕೊಂಡಿದ್ದರು ಎಂದು ವರದಿಯಾಗಿದೆ.
ಮೃತರು ಪತ್ನಿ ಮತ್ತು ಮಕ್ಕ ಳನ್ನು ಅಗಲಿದ್ದಾರೆ.ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ.
- Advertisement -