Friday, May 3, 2024
spot_imgspot_img
spot_imgspot_img

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -G L Acharya panikkar
- Advertisement -
This image has an empty alt attribute; its file name is KRISHI-YANTHRA-MELA-1024x512.jpeg

ಪುತ್ತೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಆರೋಪಿಯನ್ನು ಚಿಕ್ಕಮುಡ್ನೂರು ಗ್ರಾಮದ ಬಟ್ಯ ಮೊಗೇರ ಬೀರ್ನಹಿತ್ತಿಲು ಎನ್ನಲಾಗಿದೆ.

ನಗರ ಠಾಣಾ ಪೊಲೀಸ್ ಹೆಚ್ ಸಿ ಸುಬ್ಬ ಪಾಟೀಲ್ ರವರು ಕರ್ತವ್ಯದಲ್ಲಿ ಇರುವಾಗ ಗಲಾಟೆ ಮಾಡಿ ಅವರಿಗೆ ಬಾಯಿಯಲ್ಲಿ ಕಚ್ಚಿದ ಪ್ರಕರಣದಲ್ಲಿ ಆರೋಪಿಯು ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ ಸುಮಾರು 8 ತಿಂಗಳಿಂದ ಕೂಲಿ ಕೆಲಸಕ್ಕೆ ಹೊರಗೆ ಹೋಗಿ ತಲೆಮಾರೆಸಿಕೊಂಡಿದ್ದ ಎನ್ನಲಾಗಿದೆ.

ಫೆ.6 ರಂದು ಮನೆಗೆ ಬಂದಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಪೊಲೀಸರು ಬೀರ್ನೆ ಹಿತ್ತಿಲು ಜಂಕ್ಷನ್ ನಲ್ಲಿ ದಸ್ತಗಿರಿ‌ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!