Thursday, May 2, 2024
spot_imgspot_img
spot_imgspot_img

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -G L Acharya panikkar
- Advertisement -

ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಮೂಲತಃ ಕಡಬ ಕೊಯಿಲ ಕಲಾಯಿ ನಿವಾಸಿ, ಪ್ರಸ್ತುತ ಕೈಕಂಬ ಉಪ್ಪಳ ಗ್ರಾಮ ಮಂಜೇಶ್ವರದ ಇಬ್ರಾಹಿಂ ಖಲಂದರ್‌ ಎನ್ನಲಾಗಿದೆ.

ಪುತ್ತೂರು ಗ್ರಾಮಾಂತರ ಠಾಣಾಯಲ್ಲಿ ಅ.ಕ್ರ . 81 /19 ರಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದ CC NO:798/20ರಲ್ಲಿ ಆರೋಪಿಯ ಮೇಲೆ ಪ್ರಕರಣ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಉದಯರವಿ ಸಲಹೆಯಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಹರೀಶ್ ಹೆಚ್ ಸಿ , ಪ್ರವೀಣ್ , ಸಚಿನ್ ರವರು ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿ, ಜ.19ರಂದು ಕೇರಳ ರಾಜ್ಯದ ಕಾಸರಗೋಡಿನ ವಿದ್ಯಾನಗರದಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ದಿನಾಂಕ ಫೆ. 02 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯ ವಿರುದ್ದ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಠಾಣೆ, ಮೂಡಬಿದ್ರಿ ಠಾಣೆ, ಪಾಂಡೇಶ್ವರ್ ಠಾಣೆ, ಕಡಬ ಠಾಣೆಯಲ್ಲಿ ವಾರೆಂಟ್ ಜಾರಿಯಲ್ಲಿದೆ.

- Advertisement -

Related news

error: Content is protected !!