Thursday, May 16, 2024
spot_imgspot_img
spot_imgspot_img

ಪುತ್ತೂರು: ಬಾಡಿಗೆ ಮನೆಯಿಂದ ಕಳವು ಪ್ರಕರಣ; ಇಬ್ಬರು ಕಳ್ಳರ ಅರೆಸ್ಟ್

- Advertisement -G L Acharya panikkar
- Advertisement -

ಪುತ್ತೂರು: ಬಾಡಿಗೆ ಮನೆಯಿಂದ ಸುಮಾರು 75ಸಾವಿರ ಮೌಲ್ಯದ ವಿವಿಧ ವಸ್ತುಗಳನ್ನು ಕಳವು ಗೈದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೂರ್ನಡ್ಕ ನಿವಾಸಿ ಮಹಮ್ಮದ್ ಮುಸ್ತಫ (28), ಸವಣೂರು ಚಾಪಳ್ಳ ನಿವಾಸಿ ಶಮೀರ್ (24) ಎಂದು ಗುರುತಿಸಲಾಗಿದೆ. ಎ.ಪಿ.ಎಂ.ಸಿ ರಸ್ತೆಯ ಸೂತ್ರಬೆಟ್ಟು ಬಾಡಿಗೆ ಮನೆ ನಿವಾಸಿ ವಿವೇಕಾನಂದ ಯಾನೆ ಸತ್ಯನಾರಾಯಣ ಅವರು ಜನವರಿ 4ರಂದು ಸ್ವಂತ ಊರಾದ ಮಧುರೈಗೆ ತಾಯಿಯ ಅಸೌಖ್ಯತೆ ಹಿನ್ನಲೆಯಲ್ಲಿ ಅಣ್ಣ ಗೋಪಿನಾಥ ಅವರು ಬಾಡಿಗೆ ಬಿಡಾರಕ್ಕೆ ಬೀಗ ಹಾಕಿ ಅವರಲ್ಲಿದ್ದ ಒಂದು ಜೊತೆ ಬೀಗದ ಕೀಯನ್ನು ಮನೆಯ ಹೊರಗಡೆ ನಿಲ್ಲಿಸಿದ್ದ ಮೋಟಾರು ಸೈಕಲ್‌ನ ಬಾಕ್ಸ್ ನಲ್ಲಿಟ್ಟು, ಇನ್ನೊಂದು ಜೊತೆ ಕೀಯನ್ನು ತಮ್ಮ ಜೊತೆಗೆ ತೆಗೆದುಕೊಂಡು ಹೋಗಿದ್ದರು.

ಜನವರಿ 8 ರಂದು ಬಾಡಿಗೆ ಬಿಡಾರಕ್ಕೆ ವಾಪಾಸು ಬಂದು ನೋಡಿದಾಗ ಮನೆಯ ಬೀಗ ಯಥಾ ಸ್ಥಿತಿಯಲ್ಲಿದ್ದು, ಒಳಗಡೆ ನೋಡಿದಾಗ ಚಾವಡಿ ಮತ್ತು ಬೆಡ್ ರೂಮ್ ನ ಬಟ್ಟೆ ಬರೆಗಳು ಚೆಲ್ಲಾ ಪಿಲ್ಲಿಯಾಗಿದ್ದುದಲ್ಲದೇ ಮನೆಯಲ್ಲಿದ್ದ 18ಸಾವಿರ ನಗದು ಸೇರಿದಂತೆ ಇತರ ವಸ್ತುಗಳನ್ನು ಕದ್ದು ಪರಾರಿಯಾಗಿದ್ದರು.

- Advertisement -

Related news

error: Content is protected !!