- Advertisement -
- Advertisement -
ಪುತ್ತೂರು: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ನೌಫಲ್ ಸರಳಿಕಟ್ಟೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೌಫಲ್ ಬಸ್ ನಿಲ್ದಾಣದಲ್ಲಿ ಮನೆಗೆಲಸ ಮಾಡುವ ಗದಗ ಮೂಲದ ಮಹಿಳೆಯೊಬ್ಬರ ಮಗಳಿಗೆ ಆಮಿಷ ಒಡ್ಡಿ ಬಸ್ ನಿಲ್ದಾಣದ ವಾಶ್ರೂಮ್ಗೆ ಕರೆದೊಯ್ದಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಈ ವಿಷಯ ಮಹಿಳೆಗೆ ತಿಳಿದು ಆರೋಪಿಯನ್ನು ವಿಚಾರಿಸಿದ್ದಾಳೆ. ಈ ವೇಳೆ ನೌಫಲ್ ಮಹಿಳೆಗೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದ್ದು, ಆಕೆ ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದಾಳೆ.
ಇದೇ ವೇಳೆ ಹಿಂದೂಪರ ಸಂಘಟನೆಗಳ ಮುಖಂಡರು ಕೂಡ ಸ್ಥಳದಲ್ಲಿ ಜಮಾಯಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಪುತ್ತೂರು: ಗದಗ ಮೂಲದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಪುತ್ತೂರಿನ ಅನ್ಯಕೋಮಿನ ಯುವಕ
- Advertisement -