- Advertisement -
- Advertisement -
ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅಡುಗೆಯ ಸಾಂಬಾರ್ ಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳಾ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.
ಪ್ರಮೀಳಾ ಡಿಸೋಜಾ ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಕ್ಕಳಿಗೆ ಬಿಸಿ ಊಟದ ಅಡುಗೆ ಮಾಡಿಕೊಂಡಿರುವಾಗ, ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿ ಇಟ್ಟಿದ್ದ ಸಾಂಬಾರ್ ಪಾತ್ರಗೆ ಕಾಲು ಜಾರಿ ಬಿದ್ದ ಪರಿಣಾಮ ಪಾತ್ರೆಯಲ್ಲಿದ್ದ ಬಿಸಿ ಬಿಸಿ ಸಾಂಬಾರ್ ಪ್ರಮೀಳಾ ಮೈ ಮೇಲೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ..!
- ಕಾಸರಗೋಡು: ವಿಷ ಸೇವಿಸಿ ಎ ಎಸ್ ಐ ಆತ್ಮಹತ್ಯೆ..!
- ವಿಟ್ಲ:(ಮಾ.6) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮರ್ಪಣ್ ವಿಟ್ಲ ಸೇವಾರ್ಥ ಶ್ರೀ ದೇವರಿಗೆ ವಸಂತ ಪೂಜೆ
- ಪುತ್ತೂರು: ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ; ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿ
- ವಿಟ್ಲ: ಸಮರ್ಥ್ ಫ್ಯಾನ್ಸಿ & ಸ್ಟೇಷನರಿ ಮಳಿಗೆ ಶುಭಾರಂಭ
- Advertisement -