ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮೊತ್ಸವವು ಡಿ 10 ಮತ್ತು 11 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತೂರಾಯರವರು ಹಾಗೂ ಕ್ಷೇತ್ರದ ಅಧ್ಯಕ್ಷರಾದ ಗಂಗಾಧರ ಅಮೀನ್ ಹೊಸಮನೆ ಬಿಡುಗಡೆಗೊಳಿಸಿ, ಜಾತ್ರೋತ್ಸವದ ರೂಪು ರೇಷೆಗಳನ್ನು ತಿಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಸಿ.ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ, ಗ್ರಾಮ ಪಂಚಾಯತ್ನ ಉಪಾಧ್ಯಕ್ಷರಾದ ಪೂರ್ಣಿಮಾ ಶೆಟ್ಟಿ, ವಿಕ್ರಂ ಜೈನ್ ಬಾರಿಕೆ, ಶ್ರೀಕೃಷ್ಣ ಯುವಕ ಮಂಡಲದ ಅಧ್ಯಕ್ಷರಾದ ಸಂತೋಷ್ ಸುವರ್ಣ ಮೇರ್ಲ, ಶ್ರೀ ಅಮ್ಮನವರ ದೇವಸ್ಥಾನದ ಕಾರ್ಯದರ್ಶಿ ಸುರೇಶ್ ಪೆಲತ್ತಡಿ, ಧನಂಜಯ ಶೆಟ್ಟಿ ಮೇರ್ಲ. ತಾರಾನಾಥ್ ಮೇರ್ಲ, ಆನಂದ ಅಮೀನ್ ಹೊಸಮನೆ, ಶೇಷಪ್ಪ ಗೌಡ (ಪಿಎಸ್ಐ), ಧನುಷ್ ಹೊಸಮನೆ, ಪವನ್ ಶೆಟ್ಟಿ, ಶ್ರೀ ಚಕ್ರ ರಾಜರಾಜೇಶ್ವರಿ ಮಹಿಳಾ ಮಂಡಳಿ ಹಾಗೂ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿಯ ಸದಸ್ಯರು ಮತ್ತು ಊರಿನ ಸಮಸ್ತ ಭಕ್ತದಿಗಳು ಉಪಸ್ಥಿತರಿದ್ದರು.