ಪುತ್ತೂರು : ಪುತ್ತೂರು ಉಪ ವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ.
ಡಿ.14ರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದು. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ದಿನಾಂಕ:15/12/2021 ರಿಂದ ದಿನಾಂಕ:17/12/2011 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.
ಈ ನಡುವೆ ಉಪವಿಭಾಗದ ನಾನಾ ಕಡೆ ಪಿ ಎಫ್ ಐ ನವರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗ ದಂಡಾಧಿಕಾರಿ ಡಾ| ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.
- ನಿಷೇದಾಜ್ಞೆ ಅವಧಿಯಲ್ಲಿ ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ,ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ, ಮತ್ತು ಸರಕಾರಿ ಕಛೇರಿ ಸುತ್ತಮುತ್ತು ಗುಂಪು ಸೇರಬಾರದು ಅಥವಾ ಗುಂಪು ಸೇರುವುದನ್ನು ನಿಷೇದಿಸಿದೆ.
- ಯಾವುದೇ ಆಯುಧ, ಕೊಡುಗೋಲು,ಖರ ಭರ್ಚಿ,ಗದೆ, ಕೋಲು,ಚೂರಿ ದೊಡ್ಡ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
- ಯಾವುದೇ ಸಾರ್ವಜನಿಕ ಮೇರವಣಿಗೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು.
- ಕಲ್ಲುಗಳನ್ನು ಒಟ್ಟುಗುಡಿಸುವುದು ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ.
- ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
- ಸಾರ್ವಜನಿಕ ಕೋಮು ಸೌಹರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು ಬೇಷ್ಠ ಮಾಡುವುದು , ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ಥಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅವರಾಧ ಎಸಗುವ ಮತ್ತು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಿದೆ.