Thursday, April 25, 2024
spot_imgspot_img
spot_imgspot_img

ಪುತ್ತೂರು: ಬೈಕ್‌ ಅಪಘಾತ; ಪಾದಚಾರಿ ಸಾವು- ಬೈಕ್‌ ಸವಾರ ಗಂಭೀರ

- Advertisement -G L Acharya panikkar
- Advertisement -
vtv vitla

ಪುತ್ತೂರು: ಬೈಕ್‌ ಅಪಘಾತದಿಂದಾಗಿ ಪಾದಚಾರಿ ವೃದ್ಧರೋರ್ವರು ಮೃತಪಟ್ಟು ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪುತ್ತೂರಿನ ಕೌಡಿಚ್ಚಾರ್‌ನಲ್ಲಿ ನಡೆದಿದೆ.

ಮೃತರನ್ನು ಕಾವು ಮಿನೋಜಿಕಲ್ಲು ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು ಉಬರಡ್ಕ ನಿವಾಸಿ ಗುರುಪ್ರಸಾದ್ ಎಂದು ಗುರುತಿಸಲಾಗಿದೆ.

ಅಪಘಾತವಾಗಿ ಬಿದ್ದಿದ್ದ ಗಾಯಾಳುಗಳನ್ನು ಅದೇ ದಾರಿಯಾಗಿ ಕಚೇರಿಯಿಂದ ಬರುತ್ತಿದ್ದ ಪುತ್ತೂರಿನ ಯುವ ನ್ಯಾಯಾವಾದಿ, ಹಿಂದೂ ಜಾಗರಣ ವೇದಿಕೆಯ ಮುಖಂಡ ಚಿನ್ಮಯ್ ರೈ ಈಶ್ವರಮಂಗಲ, ಅರಿಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ ಸಚಿನ್ ರೈ ಪಾಪೆಮಜಲು ಹಾಗೂ ಹಿಂಜಾವೆ ಪ್ರಮುಖ ಜಗದೀಶ್ ಜೊತೆಗೂಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಅದಾಗಲೇ ನಾರಾಯಣ ನಾಯ್ಕ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಸದ್ಯ ಯುವಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಾಗಿಸಲಾಗಿದೆ.

- Advertisement -

Related news

error: Content is protected !!