- Advertisement -
- Advertisement -
ಪುತ್ತೂರು: ಬ್ಯಾಂಕ್ವೊಂದಕ್ಕೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಬೋಳಂತಿಮೊಗರು ನಿವಾಸಿ ಅಬ್ದುಲ್ ಗಫೂರ್ ಎಂಬವರ ಮಗ ಮೊಹಮ್ಮದ್ ಅನ್ವರ್ ಬಂಧಿತ ಆರೋಪಿ.
2017ರಲ್ಲಿ ಆರೋಪಿ ಅನ್ವ ರ್ ವಿರುದ್ಧ ಕಬಕದ ಬ್ಯಾಂಕ್ವೊಂದರಲ್ಲಿ ಸಾಲಕ್ಕೆ ಸಂಬಂಧಿಸಿದಂತೆ ವಂಚನೆ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು.
ಇದೀಗ ಪುತ್ತೂರು ಪೊಲೀಸರು ಆರೋಪಿಯನ್ನು ವಿಟ್ಲದಲ್ಲಿ ಬಂಧಿಸಿದರೆ. ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ..
- Advertisement -