ಪುತ್ತೂರಿನ ಹಿತ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್ನ ಜನರೇಟರ್ ಬ್ಯ ಟರಿಯನ್ನು ಕಳವು ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳಮೂಲದ ಇಟ್ಟಿ ಪನ್ನಿಕರ್ ಎನ್ನಲಾಗಿದೆ.
ಈ ಬಗ್ಗೆ ದೂರು ದಾಖಲಾಗಿದ್ದು ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಮತ್ತು ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರು ನಗರ ಠಾಣೆ ಪಿ.ಎಸ್.ಐ.ನೇತೃತ್ವದಲ್ಲಿ ಪತ್ತೆ ಮಾಡಿ ದಸ್ತಗಿರಿ ಮಾಡಿ, ಸೊತ್ತು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಕೊಡಲಾಗಿದೆ.
ಪತ್ತೆ ಕಾರ್ಯದಲ್ಲಿ ಮಾನ್ಯ ಪುತ್ತೂರು ಪೊಲೀಸ್ ಉಪಾಧೀಕ್ಷಕರವರ ನಿರ್ದೆಶನದಂತೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರವರು ಸುನೀಲ್ ಕುಮಾರ್ ಮಾರ್ಗದರ್ಶನದಲ್ಲಿ ಪಿ.ಎಸ್.ಐ.ರಾಜೇಶ್ ಕೆ.ವಿ.ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್.ಸಿ. ಸ್ಕರಿಯಾ, ಜಗದೀಶ್, ಸುಬ್ರಮಣ್ಯ. ಪಿ.ಸಿ. ಕಿರಣಕುಮಾರ್ ಭಾಗವಹಿಸಿರುತ್ತಾರೆ.