Thursday, May 2, 2024
spot_imgspot_img
spot_imgspot_img

ಪುತ್ತೂರು: ಭಜನಾ ಮಂದಿರದ ಜಾಗದ ವಿಚಾರ; ಎರಡು ತಂಡಗಳ ನಡುವೆ ಮಾತಿನಚಕಮಕಿ, ಪರಸ್ಪರ ಹಲ್ಲೆ; ಮೂರು ಮಂದಿ ಆಸ್ಪತ್ರೆಗೆ ದಾಖಲು..!

- Advertisement -G L Acharya panikkar
- Advertisement -

ಪುತ್ತೂರು: ಜಾಗದ ವಿಷಯವಾಗಿ ಇತ್ತಂಡಗಳ ಮಧ್ಯೆ ಹಲ್ಲೆ ನಡೆದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

ಭಜನಾ ಮಂಡಳಿ ಜಾಗದ ವಿಷಯವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೈದಿದ್ದು, ಒಂದು ತಂಡ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದರೇ ಮತ್ತೊಂದು ತಂಡ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದೆ.

vtv vitla
vtv vitla

ಆರ್ಯಾಪು ಗ್ರಾಮದ ದೊಡ್ಡಡ್ಕ ನಿವಾಸಿ ಸರೋಜಿನಿ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಂದು ತಂಡದ ಪೂವಪ್ಪ ನಾಯ್ಕ್ ಮತ್ತು ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಎರಡು ತಂಡದವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೂವಪ್ಪ ನಾಯ್ಕ್ ರವರು ಮಹಾಲಕ್ಷ್ಮಿ ಭಜನಾ ಮಂದಿರದ ಸದಸ್ಯರಾಗಿದ್ದು, ಭಜನಾ ಮಂದಿರದ ಸುತ್ತ ಹುಲ್ಲು ತೆಗೆದು ಸ್ವಚ್ಛಗೊಳಿಸಲು ತೆರಳಿದ ವೇಳೆ ಹತ್ತಿರದ ಮನೆಯ ನಾಗರಾಜ ಆಚಾರ್ಯ, ನಾರಾಯಣ ಆಚಾರ್ಯ, ಸರೋಜಿನಿ, ನಾಗರಾಜ ಆಚಾರ್ಯ ಅವರ ಪತ್ನಿ ಮತ್ತು ಅತ್ತಿಗೆ ಮಾರಕಾಯುಧಗಳನ್ನು ತಂದು ಪೂವಪ್ಪ ನಾಯ್ಕ್ ಮತ್ತು ಅವರ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಅಷ್ಟೇ ಅಲ್ಲದೇ ಅವರ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾಗರಾಜ ಆಚಾರ್ಯ, ನಾರಾಯಣ ಆಚಾರ್ಯ, ಅವರ ತಾಯಿ ಸರೋಜಿನಿ, ನಾಗರಾಜ ಆಚಾರ್ಯ ಹೆಂಡತಿ ಮತ್ತು ಅತ್ತಿಗೆ ವಿರುದ್ಧ ಪೂವಪ್ಪ ನಾಯ್ಕ್ ರವರು ದೂರು ನೀಡಿದ್ದಾರೆ.

ಈ ಬಗ್ಗೆ ಸರೋಜಿನಿ ರವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ್, ವೆಂಕಟಕೃಷ್ಣ ಭಟ್,ಸೇಸಪ್ಪ ನಾಯ್ಕ್ ಹಾಗೂ ಅವರ ಸಂಗಡಿಗರ ವಿರುದ್ಧ ದೂರು ನೀಡಿದ್ದಾರೆ.

ಆರ್ಯಾಪು ದೊಡ್ಡಡ್ಕದಲ್ಲಿರುವ ಜಾಗವು ಸರೋಜಿನಿ ರವರ ಪೂರ್ವಜರ ಜಾಗದಲ್ಲಿ, ಹಿಂದಿನಿಂದ ಇದ್ದ ಭಜನಾ ಮಂದಿರವನ್ನು ಅಲ್ಲಿ ನಿರ್ಮಿಸಿ ಭಜನಾ ಕಾರ್ಯವನ್ನು ನೆರವೇರಿಸಲಾಯಿತು, ದಿನ ಕಳೆದಂತೆ ಸ್ಥಳೀಯರನ್ನ ಕರೆಸಿ ಆ ಜಾಗದಲ್ಲಿ ಭಜನಾ ಕಾರ್ಯವನ್ನು ನೆರವೇರಿಸಲಾಯಿತು.

ಕ್ರಮೇಣ ಸ್ಥಳೀಯರು ಸಾರ್ವಜನಿಕ ಮಂದಿರ ಎಂದು ಹೇಳಿ ಕಿರಿಕ್ ಮಾಡಿದ್ದು, ಈ ಬಗ್ಗೆ ಕೇಸು ದಾಖಲಿಸಿ 10 ವರ್ಷ ಕಳೆದಿದ್ದು, ಕೋರ್ಟ್ ನಿಂದ ಆ ಜಾಗದಲ್ಲಿ ಕೆಲಸ ಕಾರ್ಯ ನಿರ್ವಹಿಸದಂತೆ ತಡೆಯಾಜ್ಞೆ ನೀಡಿದ್ದು, ಈ ನಡುವೆಯೂ ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ್, ವೆಂಕಟಕೃಷ್ಣ ಭಟ್,ಸೇಸಪ್ಪ ನಾಯ್ಕ್ ಹಾಗೂ ಅವರ ಸಂಗಡಿಗರು ಆ ಜಾಗದಲ್ಲಿ ಕೆಲಸ ನಿರ್ವಹಿಸಿದ್ದಾರೆ. ಅವರಲ್ಲಿ ಪ್ರಶ್ನಿಸಲು ತೆರಳಿದ ಸರೋಜಿನಿ, ಮತ್ತು ಅವರ ಸೊಸೆ ಹಾಗೂ ಮತ್ತೋರ್ವರ ಮೇಲೆ ಹಲ್ಲೆ ನಡೆಸಿದ್ದು, ಹುಲ್ಲು ತೆಗಿಯುವ ಮೆಷಿನ್ ಎಂದು ಸರೋಜಿನಿ ರವರ ಕೈ ಮೇಲೆ ಹಿಡಿದು ಹಲ್ಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!