Friday, April 26, 2024
spot_imgspot_img
spot_imgspot_img

ಪುತ್ತೂರು: ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

- Advertisement -G L Acharya panikkar
- Advertisement -

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಭಾರತ ಸರ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ರಾಜ್ಯದಲ್ಲಿ29ನೇ ಮಕ್ಕಳ ವಿಜ್ಞಾನ ಸಮಾವೇಶವನ್ನು 10-17ರ ವಯೋಮಾನದ ಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು.

ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ಸಲ್ಲಿಸಿದ್ದ ಯೋಜನಾ ವರದಿಗಳ ಮೌಲ್ಯಮಾಪನವನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ತಜ್ಞ ಮೌಲ್ಯಮಾಪಕರ ತಂಡ ಮಾಡಿರುತ್ತದೆ. ಜನವರಿ ತಿಂಗಳಲ್ಲಿ ನಡೆದ 29ನೇ ರಾಜ್ಯಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 2 ತಂಡಗಳು ಭಾಗವಹಿಸಿದ್ದು,ಇದರಲ್ಲಿ ಸೀನಿಯರ್ ವಿಭಾಗದ ತಂಡವು ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿರುತ್ತದೆ.

vtv vitla
vtv vitla

ಸೀನಿಯರ್ ವಿಭಾಗದಲ್ಲಿ9ನೇ ತರಗತಿಯ ವಿದ್ಯಾರ್ಥಿಗಳಾದ ಅನ್ವಿತ್.ಎನ್ (ಮುಡೋಡಿ ನಿವಾಸಿ ಶ್ರೀ ಶ್ರೀಪತಿ.ಎನ್ ಮತ್ತು ಶ್ರೀಮತಿ ವಿದ್ಯಾಲಕ್ಷ್ಮೀ.ಎ ಇವರ ಪುತ್ರ) ಹಾಗೂ ಸಮರ್ಥರಾಮರೈ(ಮೊದೆಲ್ಕಾಡಿಶ್ರೀ ಸತೀಶ್‌ಕುಮಾರ್‌ರೈ ಮತ್ತು ಪ್ರಗತಿ.ಎಸ್.ರೈಇವರ ಪುತ್ರ) ಇವರು herbal spray from weed, Wedeliatrilobata: to repell household vegetable pests’ ಎಂಬ ಪ್ರಬಂಧಗಳನ್ನು ಮಂಡನೆ ಮಾಡಿರುತ್ತಾರೆ.


ಶಾಲಾ ವಿಜ್ಞಾನ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪ್ರಬಂಧಗಳನ್ನು ಮಂಡನೆ ಮಾಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರುತಿಳಿಸಿರುತ್ತಾರೆ.

- Advertisement -

Related news

error: Content is protected !!