- Advertisement -
- Advertisement -
ಪುತ್ತೂರು: ಫ್ರಿಡ್ಜ್ ರಿಪೇರಿ ಮಳಿಗೆಯೊಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿಗಾಹುತಿಯಾದ ಘಟನೆ ಉರ್ಲಾಂಡಿಯ ಶ್ರುಶ್ರುತ ಆಸ್ಪತ್ರೆ ಬಳಿಯ ಕೃಷ್ಣ ಕಾಂಪ್ಲೆಕ್ಸ್ನಲ್ಲಿ ನಡೆದಿದೆ. ಸುರಭಿ ರೆಫ್ರಿಜರೇಟರ್ & ಏರ್ ಕಂಡೀಷನರ್ ಸೇಲ್ಸ್ – ಸರ್ವೀಸ್ ಅಂಗಡಿಯಲ್ಲಿ ಅಗ್ನಿ ಅವಘಡ ನಡೆದಿದೆ.
ಘಟನೆ ಸಂಭವಿಸಿದ ವೇಳೆ ಮಳಿಗೆ ತೆರೆಯದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ಲಕ್ಷಾಂತರ ಮೌಲ್ಯದ ಇಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಹೋಗಿದೆ. ಕೆಲವು ಅರೆಬರೆ ಸುಟ್ಟು ಹೋಗಿದೆ. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿದ್ದು , ಕಾರ್ಯಾಚರಣೆ ನಡೆಸುತ್ತಿದ್ದಾರೆ.
- Advertisement -