- Advertisement -
- Advertisement -
ಪುತ್ತೂರು: ನೇರಳಕಟ್ಟೆ ಮತ್ತು ಬಂಟ್ವಾಳ ರೈಲು ನಿಲ್ದಾಣಗಳ ಮಧ್ಯೆ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದಾರೆ.
ಪ್ರಜ್ಞಾ ಹೀನಾ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಗೆ ಅಂದಾಜು ಸುಮಾರು 40 ವರ್ಷ ಪ್ರಾಯವಾಗಿದ್ದು, ಸದ್ಯ ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವ್ಯಕ್ತಿಯ ಗುರುತು ಪರಿಚಯ ಇದ್ದಲ್ಲಿ ರೈಲ್ವೇ ಪೊಲೀಸರನ್ನು ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.
- Advertisement -