- Advertisement -
- Advertisement -
ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯೊoದರ ವಸತಿ ನಿಲಯದಿಂದ 19 ವರ್ಷ ಪ್ರಾಯದ ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಾಪತ್ತೆಯಾದ ವಿದ್ಯಾರ್ಥಿಯನ್ನು ಪುತ್ತೂರಿನ ವಿದ್ಯಾಸಂಸ್ಥೆಯೊoದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ಚಿತ್ರದುರ್ಗದ ಆದಿತ್ಯ ಜೆ(19) ಎನ್ನಲಾಗಿದೆ.
ವಿದ್ಯಾರ್ಥಿಯು ಫೆ.22ರಂದು ವಸತಿ ನಿಲಯದಿಂದ ಕಾಲೇಜಿಗೆಂದು ಹೋದವರು ಪುನಃ ಹಿಂದಿರುಗಿಲ್ಲ. ಈ ಕುರಿತು ವಿದ್ಯಾಸಂಸ್ಥೆಯ ಸಿಸಿ ಕ್ಯಾಮರ ಪರಿಶೀಲಿಸಿದಾಗ ಕಾಲೇಜಿನ ಸಮವಸ್ತ್ರ ಧರಿಸಿ ಹೋಗುತ್ತಿರುವುದು ಕಂಡು ಬಂದಿದ್ದು, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣದಲ್ಲಿ ಹುಡುಕಾಟ ನಡೆಸಲಾಗಿತ್ತು ಎನ್ನಲಾಗಿದೆ. ವಸತಿ ನಿಲಯದ ಮೇಲ್ವಿಚಾರಕರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
- Advertisement -