Sunday, June 29, 2025
spot_imgspot_img
spot_imgspot_img

ಪುತ್ತೂರು : ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಮೃತ ಮಹೋತ್ಸವದ ಸ್ವಾತಂತ್ರೋತ್ಸವ ನಡಿಗೆಗೆ ಚಾಲನೆ

- Advertisement -
- Advertisement -

ಪುತ್ತೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ನಡಿಗೆ ಪುತ್ತೂರಿನ ದರ್ಬೆಯಲ್ಲಿ ಸೋಮವಾರ ಬೆಳಿಗ್ಗೆ ಆರಂಭಗೊಂಡಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ಶೆಟ್ಟಿ ತೆಂಗಿನಕಾಯಿ ಒಡೆದು ಹಿರಿಯ ಕಾಂಗ್ರೆಸ್ಸಿಗ ಮೊಯಿದು ಕುಟ್ಟಿಯವರು ಧ್ವಜ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದಕ್ಕೆ ಮೊದಲು ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯೋತ್ಸವದ ಬಗ್ಗೆ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಝೇವಿಯರ್ ಡಿಸೋಜ ಸ್ವಾತಂತ್ರ್ಯೋತ್ಸವ ಬಗ್ಗೆ ಮಾತನಾಡಿದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಜೆ.ಆರ್ ಲೋಬೋ ಶುಭಹಾರೈಸಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯ ಕ್ಷ ಎಂ.ಬಿ ವಿಶ್ವನಾಥ ಸ್ವಾಗತಿಸಿದರು.

- Advertisement -

Related news

error: Content is protected !!