- Advertisement -
- Advertisement -
ಪುತ್ತೂರು: ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಸೈಕಲ್ ಸವಾರ ಮೃತಪಟ್ಟ ಘಟನೆ ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸಂಭವಿಸಿದೆ. ಮೃತವ್ಯಕ್ತಿ ಕೆಮ್ಮಿಂಜೆ ನಿವಾಸಿ ಚಿದಾನಂದ ಎನ್ನಲಾಗಿದೆ.
ಚಿದಾನಂದ ಅವರು ಕೆಮ್ಮಿಂಜೆ ಅವರು ದೇವಸ್ಥಾನದ ಕಡೆ ಸೈಕಲ್’ನಲ್ಲಿ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
- Advertisement -