- Advertisement -
- Advertisement -


ಪುತ್ತೂರು: ನೆಟ್ಟಣಿಗೆ ಮುಡ್ನೂರು ನಿವಾಸಿಗಳು ಕೆಲವು ವರ್ಷಗಳಿಂದ ನೀರಿನ ಸಮಸ್ಯೆ ಹಾಗೂ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಜನಪ್ರತಿನಿಧಿಗಳ ಟೊಳ್ಳು ಭರವಸೆಯಿಂದ ಬೇಸತ್ತ ಜನರು ಬ್ಯಾನರ್ ಆಳವಡಿಸಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ.

ಹಲವು ಭಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಸಮಸ್ಯೆಗೆ ಸ್ಪಂದಿಸದೆ ಕೇವಲ ಟೊಳ್ಳು ಭರವಸೆಗೆ ಬೇಸತ್ತ ಜನರು ಮುಂದಿನ ವಿಧಾನಸಭಾ ಚುನಾವಣೆಯನ್ನು ಪಕ್ಷ-ಜಾತಿ ಮರೆತು ಸಾಮೂಹಿಕವಾಗಿ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ಆಳವಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -