ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂದೂ ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ ಜಗದೀಶ್ ಕಾರಂತರವರು ತನ್ನ ಭಾಷಣದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅವೆಹೇಳನಕಾರಿಯಾಗಿ ಮಾತಾನಾಡಿ ಮುಸ್ಲಿಂ ಸಮುದಾಯದ ಭಾವನೆಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಕೇಸು ದಾಖಲಿಸುವಂತೆ ಪುತ್ತೂರು ಮುಸ್ಲಿಂ ಸಮುದಾಯದ ನಿಯೋಗ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾರಂತರವರು ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಪೊಲೀಸ್ ಅಧಿಕಾರಿಗಳು ಸುಮೋಟೋ ಕೇಸು ದಾಖಲಿಸುವ ಅವಕಾಶ ಇದ್ದರೂ ದಾಖಲಿಸದೆ ಅವರ ದಿವ್ಯ ಮೌನವು ಇಲ್ಲಿನ ಶಾಂತಿಪ್ರಿಯರಾದ ನಮಗೆ ಖೇದಕರವಾಗಿರುತ್ತದೆ.
ಆದುದರಿಂದ ಕಳೆದ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಎಲ್ಲಾ ಪುತ್ತೂರಿನ ಮುಸ್ಲಿಂ ಸಮುದಾಯದ ಸಂಘ ಸಂಸ್ಥೆಯ ನಾಯಕರು ಮಸೀದಿಯ ಅಧ್ಯಕ್ಷರು ರಾಜಕೀಯ ನಾಯಕರು ವಕೀಲರ ನಿಯೋಗವು ಸೇರಿದಂತೆ ಪುತ್ತೂರು ಉಪ ಪೋಲಿಸ್ ಅಧೀಕ್ಷರಿಗೆ ಜಗದೀಶ್ ಕಾರಂತ ಮತ್ತು ಸಂಘಟಕರ ಮೇಲೆ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಮನವಿಯನ್ನು ಸಲ್ಲಿಸಲಾಗಿದೆ.
ದ.ಕ.ಜಿಲ್ಲಾ ಯುವಜನ ಪರಿಷತ್ ಇದರ ಅಧ್ಯಕ್ಷ ಜನಾಬ್ ಹಾಜಿ ಅಶ್ರಫ್ ಕಲ್ಲೆಗ ಅವರು ದೂರು ನೀಡಿದವರು. ನಿಯೋಗದಲ್ಲಿ ದ.ಕ ಜಿಲ್ಲಾ ಯುವಜನ ಪರಿಷತ್ ಇದರ ಪ್ರಧಾನ ಕಾರ್ಯದರ್ಶಿ ಸಾಲ್ಮರ ಶರೀಫ್ ಸೇರಿದಂತೆ ಪ್ರಮುಖರು ಹಾಜರಿದ್ದರು.