- Advertisement -
- Advertisement -
ಪುತ್ತೂರು: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿಯಾಗಿರುವ ನ್ಯಾಯವಾದಿ ಶೈಲಜಾ ಅಮರನಾಥ್ ಅವರ ಪುತ್ತೂರು ಬಪ್ಪಳಿಗೆ ಮನೆಗೆ ಯುವಕರ ತಂಡ ದಾಳಿ ನಡೆಸಿರುವ ಘಟನೆ ಜೂನ್ 18 ರಂದು ಸಂಜೆ ನಡೆದಿದೆ.
ಶೈಲಜಾ ಅಮರನಾಥರವರು ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ಮೂಲಕ ನಡೆದ ಚರ್ಚಾಕೂಟದಲ್ಲಿ ಶ್ರೀ ರಾಮಚಂದ್ರ , ಸೀತಾಮಾತೆ ಮತ್ತು ಹನುಮಂತ ದೇವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಮುಖರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಬೆನ್ನಲ್ಲಿಯೇ ಶೈಲಜಾ ಅಮರನಾಥರವರು ಮನೆಯಂಗಳಕ್ಕೆ ಬಂದಿರುವ ಯುವಕರ ತಂಡವೊಂದು ಮನೆಗೆ ದಾಳಿ ನಡೆಸಿ ಗಾಜುಗಳನ್ನು ಪುಡಿಗೈದು, ಕಪ್ಪು ಮಸಿ ಎರಚಿ ಪರಾರಿಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾಯದರ್ಶಿಯೂ ಆಗಿರುವ ಶೈಲಜಾ ಅಮರನಾಥರವರು ಮಾಹಿತಿ ನೀಡಿದ ಕೂಡಲೇ ಪೊಲೀಸರು ಶೈಲಜಾರವರ ಮನೆಗೆ ಭೇಟಿ ನೀಡಿದ್ದಾರೆ.
- Advertisement -