Saturday, June 28, 2025
spot_imgspot_img
spot_imgspot_img

ಪುತ್ತೂರು: ಹಿಂ.ಜಾ.ವೇ ಕಾರ್ಯಕರ್ತ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತ್ಯು

- Advertisement -
- Advertisement -

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪುತ್ತೂರು ತಾಲೂಕು ಸುಳ್ಯಪದವು ಕನ್ನಡ್ಕ ನಿವಾಸಿ ಧನುಷ್(21) ಮೃತಪಟ್ಟ ಯುವಕ. ಧನುಷ್ ಎ.22 ರಂದು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ತೋಟದಲ್ಲಿದ್ದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಧನುಷ್ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ನಡೆಸುತ್ತಿದ್ದು , ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಡೆದ ಹಿಂದೂ ಜಾಗರಣ ವೇದಿಕೆ ಸುಳ್ಯ ಪದವು ಘಟಕದಲ್ಲಿ ಪದಾಧಿಕಾರಿಯಾಗಿ ಆಯ್ಕೆಯಾಗಿದ್ದರು. ಮೃತರು ತಂದೆ – ತಾಯಿ ಸಹೋದರ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!