- Advertisement -
- Advertisement -
ಪುತ್ತೂರು: ಖೋಟಾ ನೋಟು ಪ್ರಕರಣದ ಆರೋಪಿಯನ್ನು 19 ವರ್ಷಗಳ ನಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ. ತಲೆಮರೆಸಿಕೊಂಡಿದ್ದ ಆರೋಪಿ ಕಾಸರಗೋಡು ಮೂಲದ ಬೋವಿಕ್ಕಾನ ನಿವಾಸಿ ಸಿದ್ದಿಕ್ (41) ಎನ್ನಲಾಗಿದೆ.
ಆರೋಪಿಯ ಪತ್ತೆಗಾಗಿ ಡಾ| ಗಾನಾ ಪಿ. ಕುಮಾರ್, ಪೊಲೀಸ್ ಉಪಾಧೀಕ್ಷಕರು ಪುತ್ತೂರು ಉಪ ವಿಭಾಗದವರು ಹಾಗೂ ಉಮೇಶ್ ಉಪ್ಪಳಿಕೆ, ವೃತ್ತ ನಿರೀಕ್ಷಕರು, ಪುತ್ತೂರು ಗ್ರಾಮಾಂತರ ಅವರ ಮಾರ್ಗದರ್ಶನದಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಉದಯರವಿ ಎಂ. ವೈ ರವರು ಸಿಬ್ಬಂದಿಗಳಾದ ಅದ್ರಾಮ ಮತ್ತು ಪ್ರವೀಣ್ ರೈ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
- Advertisement -