- Advertisement -
- Advertisement -
ಪುತ್ತೂರು: ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಕೆದಿಲ ಗ್ರಾಮ ನಿವಾಸಿ ಮಜೀದ್(45) ಎನ್ನಲಾಗಿದೆ. ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಆರೋಪಿ ಮಜೀದ್ ನ್ಯಾಯಾಲಕ್ಕೆ ಹಾಜರಾಗದೇ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಆರೋಪಿಯ ಬಗ್ಗೆ ಪೊಲೀಸರು ಸುಮಾರು ಎರಡು ವರ್ಷಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಆರೋಪಿಯು ಬೆಂಗಳೂರು ,ಕೋಲಾರ ಮುಂತಾದ ಕಡೆ ವಾಸವಿದ್ದ ಎಂದು ತಿಳಿದು ಬಂದಿತ್ತು. ನಂತರ ಈತನ ಬಗ್ಗೆ ಮಾಹಿತಿ ಸಂಗ್ರಹಿಸದಾಗ ಸುಮಾರು 3 ತಿಂಗಳಿನಿಂದ ಬಂಟ್ವಾಳದ ಗೂಡಿನ ಬಳಿ ವಾಸವಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಇದರ ಪ್ರಕಾರ ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -