Wednesday, May 8, 2024
spot_imgspot_img
spot_imgspot_img

ಪುತ್ತೂರ ಒಡೆಯನ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

- Advertisement -G L Acharya panikkar
- Advertisement -

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು.ಈ ಬಾರಿ ದೇವಳದ ತೋಟದಿಂದಲೇ ಗೊನೆ ಮುಹೂರ್ತ ನಡೆಸಲಾಯಿತು.

ಬೆಳಿಗ್ಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ದೇವಳದ ಸತ್ಯ ಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ದೇವಳದ ರಥ ಬೀದಿಯ ಮೂಲಕ ದೇವಳದ ಶ್ರೀ ಅಯ್ಯಪ್ಪ ಗುಡಿಯ ಬಳಿಯಲ್ಲಿರುವ ದೇವಳದ ತೋಟದಿಂದಲೇ ಗೊನೆ ಮುಹೂರ್ತ ನೆರವೇರಿಸಲಾಯಿತು.

ಪ್ರಧಾನ ಅರ್ಚಕ ವೇ.ಮೂ.ವಿ.ಎಸ್. ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್‌ ಹಾಗೂ ಸದಸ್ಯರು, ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!