ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ ಅಪ್ಪು ಅಭಿಮಾನಿಗಳು ಜಮಾಯಿಸುತ್ತಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಅಣ್ಣನ ಸಿನಿಮಾವನ್ನ ಕಣ್ತುಂಬಿಕೊಳ್ಳಲೆಂದು ಥಿಯೇಟರ್ಗೆ ಹೋಗಲು ಪುನೀತ್ ಪ್ಲಾನ್ ಮಾಡಿದ್ದರಂತೆ. ಅಷ್ಟರಲ್ಲಿ ಹೃದಯಾಘಾತ ಸಂಭವಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ಮೂಲಗಳ ಪ್ರಕಾರ ನಟ ಅಪ್ಪು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಆಸ್ಪತ್ರೆಗೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಬಂದಿದ್ದಾರೆ. ಪುನೀತ್ ಅವರ ಮನೆ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ಅಪ್ಪು ವರ್ಕ್ಔಟ್ ಮಾಡುತ್ತಿದ್ದರು. ಆ ವೇಳೆ ಕುಸಿದು ಬಿದ್ದ ಅಪ್ಪು ಅವರನ್ನ ಕೂಡಲೇ ರಮಣಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.