Friday, March 29, 2024
spot_imgspot_img
spot_imgspot_img

ಪುನೀತ್​ ರಾಜ್​ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

- Advertisement -G L Acharya panikkar
- Advertisement -

ನಟ ಪುನೀತ್​ ರಾಜ್​ಕುಮಾರ್​ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಷ್ಟಿಷ್ಟಲ್ಲ. ಚಿಕ್ಕ ವಯಸ್ಸಿನಿಂದಲೇ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದ ಅವರು ನಂತರ ಹೀರೋ ಆಗಿ ಸ್ಯಾಂಡಲ್​ವುಡ್​ನಲ್ಲಿ ಮೆರೆದರು. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದರು.

ಈಗ ಚಿತ್ರದುರ್ಗದ ಮುರುಘಾಮಠ ಕೊಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಮರಣೋತ್ತರವಾಗಿ ಪುನೀತ್​ಗೆ ಸಿಗುತ್ತಿದೆ. ಮುರುಘಾಶ್ರೀಗಳು ಇಂದು (ನವೆಂಬರ್​ 4) ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಬಸವಶ್ರೀ ಪ್ರಶಸ್ತಿ ಐದು ಲಕ್ಷ ರೂ. ನಗದನ್ನು ಒಳಗೊಂಡಿದೆ. ಬರುವ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ಈ ಸಮಾರಂಭ ನಡೆಯಲಿದ್ದು, ಪುನೀತ್ ಪರವಾಗಿ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ನಟ ಶಿವರಾಜಕುಮಾರ್ ಅವರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ನವೆಂಬರ್ 10ರಂದು ಪುನೀತ್ ಮನೆಗೆ ಮುರುಘಾಶ್ರೀ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

ಅದ್ಭುತ ನಟನೆ ಮೂಲಕ ಗಮನ ಸೆಳೆದ ಪುನೀತ್​ ರಾಜ್​ಕುಮಾರ್​ ಅವರಿಗೆ ಸಾಕಷ್ಟು ಪ್ರಶಸ್ತಿಗಳು ಒಲಿದಿವೆ. ಡ್ಯಾನ್ಸ್​ನಲ್ಲಿ ಅವರಿಗೆ ಸರಿಸಾಟಿಯಾಗಿ ನಿಲ್ಲುವ ಮತ್ತೊಬ್ಬರು ಸಿಗೋಕೆ ಸಾಧ್ಯವಿಲ್ಲ. ಪುನೀತ್​ ಅವರದ್ದು ನಟನೆಯಲ್ಲೂ ಎತ್ತಿದ ಕೈ. ಅವರಿಗೆ ಶ್ರೇಷ್ಠ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂಬುದು ಅನೇಕರ ಒತ್ತಾಯವಾಗಿತ್ತು. ಅವರ ಮರಣಾ ನಂತರ ಈ ಕೂಗು ಮತ್ತಷ್ಟು ಹೆಚ್ಚಿದೆ. ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಈ ಬಗ್ಗೆ ಆಗ್ರಹಿಸಿದ್ದರು.

- Advertisement -

Related news

error: Content is protected !!