- Advertisement -
- Advertisement -
ಪುತ್ತೂರು: ಪೆರುವಾಯಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರು, ಕಾಂಗ್ರೇಸ್ ನಾಯಕ ಬಾಲಕೃಷ್ಣ ಪೂಜಾರಿ ಹಾಗೂ ಅವರ ಸಹೋದರ ಸಂಬಂಧಿ ವಿಶ್ವನಾಥ ಪೂಜಾರಿಯವರು ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಪುತ್ತೂರು ಒಕ್ಕಲಿಗ ಗೌಡ ಸಮಾಜದ ಚುಂಚಶ್ರೀ ಸಭಾಭವನದಲ್ಲಿ ನಡೆದ ನೂತನ ಹಾಗೂ ನಿಕಟಪೂರ್ವ ಅಧ್ಯಕ್ಷ ಉಪಾಧ್ಯಕ್ಷರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠಂದೂರು, ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ರಾಜ್ಯ ಪಂಚಾಯತ್ ರಾಜ್ ಪ್ರಕೋಷ್ಟದ ಸದಸ್ಯ ನರಸಿಂಹ ಕಾಮತ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಕೃಷ್ಣ ರೈ, ಹಿಂದುಳಿದವರ್ಗ ಮೋರ್ಚ ಜಿಲ್ಲಾ ಅಧ್ಯಕ್ಷ ಆರ್.ಸಿ ನಾರಾಯಣ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಆಶಾ ತಿಮ್ಮಪ್ಪ ಗೌಡ, ಮಾಜಿ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.
- Advertisement -