- Advertisement -
- Advertisement -
ಪೆರ್ಲ: ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಯುವತಿ ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎನ್ನಲಾಗಿದೆ. ಈಕೆ ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು.
ಶ್ರಾವ್ಯ. ಅ.29 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತಂದೆ-ತಾಯಿ ಮಧ್ಯಾ ಹ್ನ ತೋಟದ ಕೆಲಸ ಮುಗಿಸಿ ವಾಪಸ್ಸು ಬಂದಾಗ ಕೃತ್ಯ ಬೆಳಕಿಗೆಬಂದಿದೆ. ಈ ಘಟನೆ ಬಗ್ಗೆ ಬದಿಯಡ್ಕ ಪೋಲಿಸರು ದೂರು ದಾಖಲಿಸಿಕೊಂದಿದ್ದು , ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
- Advertisement -