- Advertisement -
- Advertisement -
ಮೈಸೂರು : ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್ಆರ್ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ.
ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗೀತಾ (32) ಮೃತ ದುರ್ದೈವಿ. ಫೆ.19 ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು , ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದಾರೆ.
ಹೊರಗೆ ಹೋಗಿದ್ದ ಪತಿ, ಕರೆ ಮಾಡಿದ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -