- Advertisement -
- Advertisement -
ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ.
ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ 40 ಸಾವಿರ ರೂಪಾಯಿ ಸಾಲ ಕೊಟ್ಟಿದ್ದರು. 30 ಸಾವಿರ ರೂಪಾಯಿ ಸಾಲವನ್ನು ಮರುಪಾವತಿಸಲಾಗಿತ್ತು. ಆದರೆ ಉಳಿದ 10 ಸಾವಿರ ಅಸಲು ಮತ್ತು 4 ಸಾವಿರ ರೂಪಾಯಿ ಬಡ್ಡಿ ಸೇರಿ ಒಟ್ಟು 14 ಸಾವಿರ ರೂಪಾಯಿಗಾಗಿ ಪೀಡಿಸುತ್ತಿದ್ದರು. ಇದೇ ವಿಷಯಕ್ಕೆ ಮಂಜುಳಾ ಮಗನ ಮೇಲೆ ಹಲ್ಲೆ ನಡೆದಿದೆ ಎಂದು ಕೊಪ್ಪಳ ಎಸ್ಪಿಯವರಿಗೆ ದೂರು ಸಲ್ಲಿಸಿದ್ದಾರೆ.
- Advertisement -