- Advertisement -
- Advertisement -
ಕೋಲಾರ: ಎರಡು ವರ್ಷದ ಮಗುವನ್ನ ಮೊದಲು ಮನೆಯ ಕಿಟಕಿಗೆ ನೇಣು ಹಾಕಿ ಬಳಿಕ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಣಿಘಟ್ಟದ ಚಿನ್ನಾಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಭಾನುಪ್ರಿಯಾ(21) ಮತ್ತು ಆಕೆಯ ಎರಡು ವರ್ಷದ ಮಗಳು ನಿಧಿ ಎಂದು ಗುರುತಿಸಲಾಗಿದೆ. ಭಾನುಪ್ರಿಯಾ ಇದೇ ಗ್ರಾಮದ ಹರೀಶ್ ಕುಮಾರ್ ಎಂಬಾತನನ್ನ ಕಳೆದ ಮೂರು ವರ್ಷಗಳ ಹಿಂದೆ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು.
ಈ ಮಧ್ಯೆ ಕುಟುಂಬದಲ್ಲಿ ಆಗಾಗ ಗಲಾಟೆಯಾಗುತ್ತಿದ್ದು, ಇದರಿಂದ ಮನನೊಂದು ಮಗುವನ್ನ ನೇಣಿಗೆ ಹಾಕಿದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಘಟನೆ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -