- Advertisement -
- Advertisement -
ಬೆಳಗಾವಿ: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದರು.
ಈ ವೇಳೆ ರಸ್ತೆಯಲ್ಲಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಆಯಿಷಾ ಸನದಿಯವರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಪಟ್ಟುಬಿಡದೆ ಧಿಕ್ಕಾರ, ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಅಂತ ಕೂಗುತ್ತಾ ಏದುಸಿರು ಬಿಡುತ್ತಾ ಆಯಿಷಾ ಓಡಿ ಹೋಗಿದ್ದಾರೆ. ಈ ಸಂದರ್ಭದಲ್ಲಿ ಆಯಿಷಾರನ್ನು ಬೆನ್ನತ್ತಿದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಮಹಿಳಾ ಕಾನ್ ಸ್ಟೇಬಲ್ ಒಬ್ಬರೇ ಇದ್ದ ಕಾರಣ ಪೊಲೀಸರು ಪಣತೊಟ್ಟು ಬಂಧಿಸಿ ಸುಸ್ತಾಗಿ ಹೋಗಿದ್ದರು.
- Advertisement -