- Advertisement -
- Advertisement -


ಪ್ರವಾಸಕ್ಕೆಂದು ಬೆಂಗಳೂರಿನ ಬಂದಿದ್ದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರುಪಾಲಾಗಿದ್ದು, ಅವರಲ್ಲಿ ಇಬ್ಬರ ಶವ ಪತ್ತೆಯಾಗಿದ್ದರೆ, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ದುರಂತ ಸಂಭವಿಸದೆ.
ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಸಮುದ್ರತೀರದಲ್ಲಿ ಈ ಅವಘಡ ನಡೆದಿದೆ. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್ಗೆ ಬಂದಿದ್ದ ಈ ವಿದ್ಯಾರ್ಥಿಗಳು ಇಲ್ಲಿ ಸಮುದ್ರಕ್ಕಿಳಿದು ಮೋಜು ಮಸ್ತಿ ಮಾಡುತ್ತಿದ್ದರು. ಆಗ ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರುಪಾಲಾಗಿದ್ದು, ಆ ಪೈಕಿ ಅರ್ಜುನ್, ಚೈತ್ರಶ್ರೀ ಶವ ಪತ್ತೆಯಾಗಿದೆ. ನಾಪತ್ತೆ ಆಗಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.

ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿದ್ದು, ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.


- ಬಿ.ಸಿ.ರೋಡ್ನಲ್ಲಿ ಟಿಪ್ಪರ್-ಸ್ಕೂಟರ್ ಭೀಕರ ಅಪಘಾತ: ಸಹಸವಾರ ಸಾವು, ಚಾಲಕ ವಶಕ್ಕೆ
- ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸಾರೆಪುಣಿ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು -ಶಾಸಕ ಅಶೋಕ್ ರೈ
- ಪ್ರಶ್ನೆ ಪತ್ರಿಕೆ ಭದ್ರತೆ, ಗೌಪ್ಯತೆ ಕಾಯ್ದುಕೊಳ್ಳಲು AI ಬಳಕೆಗೆ ಸಿಎಂ ಡಿ.ಕೆ.ಶಿವಕುಮಾರ್ ಸಲಹೆ
- ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ: ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಕರೆ
- ಲೈಂಗಿಕ ದೌರ್ಜನ್ಯ ಪ್ರಕರಣ – ತರುಣ್ ತೇಜ್ಪಾಲ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

- Advertisement -








