- Advertisement -
- Advertisement -
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನ ಪಡೆಯಲು ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಆಗಮಿಸಿದ್ದು ಈ ವೇಳೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡು ಧಿಕ್ಕಾರ ಕೂಗಿದ್ದಾರೆ.
ಅಂತಿಮ ನಮನ ಸಲ್ಲಿಸಲು ಸುನೀಲ್ ಕುಮಾರ್ ಹಾಗೂ ನಳೀನ್ ಕುಮಾರ್ ಕಟೀಲ್ ಆಗಮಿಸುತ್ತಿದ್ದಂತೆ ಧಿಕ್ಕಾರ ಕೂಗಿದ ಕಾರ್ಯಕರ್ತರು ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ನೂಕು ನುಗ್ಗಲು ಉಂಟಾಯಿತು. ನಾಯಕರ ಕಾರಿಗೆ ಮುತ್ತಿಕ್ಕಿ ಕಾರನ್ನು ಜಖಂಗೊಳಲು ಯತ್ನ ನಡೆಸಿದರು. ಅಂತಿಮ ನಮನ ಸಲ್ಲಿಸಲು ಶಾಸಕ ಸಂಜೀವ ಮಠಂದೂರು, ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಸೇರಿದಂತೆ ಮೊದಲಾದವರು ಆಗಮಿಸಿದ್ದರು. ಈ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
- Advertisement -