Friday, May 3, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಎನ್‌ಐಎ ಅಧಿಕಾರಿಗಳು ಮತ್ತಿಬ್ಬರನ್ನು ವಶಕ್ಕೆ ಪಡೆದು ಬೆಂಗಳೂರಿನಲ್ಲಿ ವಿಚಾರಣೆ

- Advertisement -G L Acharya panikkar
- Advertisement -

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಾಹಿದ್ (40), ಜಾಬಿರ್ ಅರಿಯಡ್ಕ (35) ಎನ್ನಲಾಗಿದೆ. ಇವರಿಬ್ಬರನ್ನು ವಶಕ್ಕೆ ಪಡೆದು ಬೆಂಗಳೂರಿನ ಎನ್.ಐ.ಎ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ಳಾರೆಯಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೊಹಿದ್ದೀನ್ ಅವರ ಮಗ ಶಾಹಿದ್ (40) ಮತ್ತು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೋಳಿ ಲೈನ್ ಸೆಲ್ ಕೆಲಸ ಮಾಡುತ್ತಿರುವ ಜಾಬಿರ್ ಅರಿಯಡ್ಕ (35) ಎಂಬಾತನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಶಾಹಿದ್ (40),

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ವಾರದ ಹಿಂದೆ ಎನ್.ಐ.ಎ ಅಧಿಕಾರಿಗಳಿಂದ ಬಂಧಿತನಾಗಿರುವ ನಿಷೇಧಿತ ಪಿಎಫ್‌ಐ ಮುಖಂಡನಾಗಿದ್ದ ಶಾಫಿ ಬೆಳ್ಳಾರೆಯ ಭಾವ ಶಾಹಿದ್ ಎಂಬಾತನಾಗಿದ್ದಾನೆ.

ಬೆಂಗಳೂರಿನಲ್ಲಿ ವಿಚಾರಣೆ ನಡೆಸುತ್ತಿರುವ ಎನ್.ಐ.ಎ ಅಧಿಕಾರಿಗಳು ಪ್ರಕರಣ ಸಂಬಂಧ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಬ್ಬರು ಕೂಡ ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರನ್ನು ಬಂಧನವಾದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 15 ಮಂದಿಯ ಬಂಧನವಾಗಲಿದೆ. ಈ ಬಗ್ಗೆ ಅಧಿಕೃತವಾಗಿ ಇನ್ನೆರಡು ದಿನದಲ್ಲಿ ಎನ್.ಐ.ಎ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಲಿದೆ.

- Advertisement -

Related news

error: Content is protected !!