Monday, April 29, 2024
spot_imgspot_img
spot_imgspot_img

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಮತ್ತೋರ್ವ ಆರೋಪಿ ತುಫೈಲ್‌ ಎನ್‌ಐಎ ಬಲೆಗೆ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ದ.ಕ ಜಿಲ್ಲೆಯಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ.

ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ.

2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಪ್ರಸ್ತುತ ಎನ್‌ಐಎ ಪ್ರಕರಣದ ತನಿಖೆ ಮಾಡುತ್ತಿದೆ. ಈತನ ತಲೆಗೆ ಐದು ಲಕ್ಷ ರೂ ಇನಾಮು ಕಟ್ಟಲಾಗಿತ್ತು.

- Advertisement -

Related news

error: Content is protected !!