Thursday, April 25, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರ್ ಮರ್ಡರ್ ಕೇಸ್ ನ 4 ಆರೋಪಿಗಳ ಗುರುತು ಪತ್ತೆಗೆ ನಗದು ಬಹುಮಾನ ಘೋಷಿಸಿದ ಎನ್.ಐ.ಎ; 4 ಪ್ರಮುಖ ಆರೋಪಿಗಳಿಗೆ ಲುಕ್ ಔಟ್ ನೋಟೀಸ್ ಜಾರಿ

- Advertisement -G L Acharya panikkar
- Advertisement -

ಸುಳ್ಯ : ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ.ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ಪ್ರವೀಣ್ ನೆಟ್ಟಾರ್ ಮರ್ಡರ್ ಕೇಸ್ ನ 4 ಆರೋಪಿಗಳ ಗುರುತು ಪತ್ತೆಗೆ ಎನ್ ಐ ಎ ನಗದು ಬಹುಮಾನ ಘೋಷಿಸಿದೆ.

ಘಟನೆ ನಡೆದು ಎರಡು ತಿಂಗಳುಗಳೆ ಕಳೆದಿದ್ದರೂ ಇನ್ನೂ ಕೆಲ ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಪ್ರವೀಣ್ ನೆಟ್ಟಾರ್ ಅವರ ಹತ್ಯಾನಂತರ ಪರಿಸ್ಥಿತಿ ರಾಜ್ಯಾದ್ಯಂತ ಬಿಗಡಾಯಿಸಿ, ಕೊನೆಗೆ ತನಿಖೆಯ ಜವಾಬ್ದಾರಿಯನ್ನು ಸರಕಾರವು ಎನ್ನೆಎಗೆ ವಹಿಸಿತ್ತು. ಎನ್ ಐ ಎ ತನಿಖೆ ವಹಿಸಿಕೊಳ್ಳಲು ತಡ ಆದ ಕಾರಣದಿಂದ ಕೆಲ ಆರೋಪಿಗಳು ತುಂಬಾ ಹುಷಾರಾಗಿದ್ದು ತಪ್ಪಿಸಿಕೊಂಡಿದ್ದರು. ಅವರು ಇವತ್ತಿಗೂ ಸಿಕ್ಕಿಲ್ಲ.

ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಾಲ್ವರು ಆರೋಪಿಗಳ ಪತ್ತೆಗೆ ಈಗ ಎನ್‌ಐಎ ಬಹುಮಾನ ಘೋಷಿಸಿದೆ . ತಲೆಮರೆಸಿಕೊಂಡ ಆರೋಪಿಗಳಾದ ಮಹಮ್ಮದ್ ಮುಸ್ತಾಫ ಬೆಳ್ಳಾರೆ, ತುಫೈಲ್ ಮಡಿಕೇರಿ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ ನೀಡುವುದಾಗಿ ಘೋಷಿಸಲಾಗಿದೆ. ಅದಲ್ಲದೆ, ಇನ್ನು ಮೂವರು – ಉಮ್ಮರ್ ಫಾರೂಕ್ ಸುಳ್ಯ, ಅಬೂಬಕ್ಕರ್ ಸಿದ್ದೀಕ್ ಬೆಳ್ಳಾರೆ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಎನ್.ಐ.ಎ.ಘೋಷಿಸಿದೆ.

- Advertisement -

Related news

error: Content is protected !!