Sunday, June 29, 2025
spot_imgspot_img
spot_imgspot_img

ಪ್ರವೀಣ್‌ ಹತ್ಯೆಯ ಪ್ರಕರಣ ಎನ್‌ಐಎಗೆ ಒಪ್ಪಿಸಿದ ಸಿಎಂ

- Advertisement -
- Advertisement -

ಬೆಂಗಳೂರು: ಪ್ರವೀಣ್ ನ ಹತ್ಯೆ, ಪ್ರಕರಣದ ತನಿಖೆಯನ್ನು ಎನ್ ಐಎಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಡಿಜಿ ಐಜಿಪಿ ಪ್ರವೀಣ್‌ ಸೂದ್‌ ಜೊತೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಆರ್ಗನೈಸಡ್‌ ಕ್ರೈಂ, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ, ಪ್ರಕರಣದ ತನಿಖೆ ತ್ವರಿತ ಗತಿಯಲ್ಲಿ ನಡೆಯುತ್ತಿದೆ, ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದ್ದು, ಪ್ರಕರಣವನ್ನು ಎನ್‌ಐಎಗೆ ವಹಿಸಲು ತೀರ್ಮಾನಿಸಿದ್ದೇವೆ. ಅದಕ್ಕೆ ಸಂಬಂಧಿಸಿದಂತೆ ಎನ್‌ಐಎಗೆ ಪತ್ರ ಬರೆಯುವುದಕ್ಕೆ ಹೇಳಿದ್ದೇನೆ ಎಂದರು.

ಕೇರಳ ಗಡಿಯಲ್ಲಿ ಸಿಸಿಟಿವಿ ಅಳವಡಿಸಿ ಚೆಕ್‌ ಪೋಸ್ಟ್‌ಲ್ಲಿ ಕಣ್ಗಾವಲು ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಪೋಲಿಸ್ ಕ್ಯಾಂಪ್ ಮಾಡಲು ತಿಳಿಸಲಾಗಿದೆ. ಕೆ.ಎಸ್.ಆರ್ ಪಿ ಬೆಟಾಲಿಯನ್ ದಕ್ಷಿಣ ಕನ್ನಡದಲ್ಲಿ ನೇಮಕ ಮಾಡಲು ಸೂಚನೆ ನೀಡಲಾಗಿದೆ. ರಾತ್ರಿ ಹೊತ್ತು ಹೆಚ್ಚು ಗಸ್ತು ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

- Advertisement -

Related news

error: Content is protected !!