Tuesday, April 23, 2024
spot_imgspot_img
spot_imgspot_img

ಪ್ರೀತಿ ನಿರಾಕರಿಸಿದ ಯುವತಿಗೆ ಬಾಡಿಗೆ ಕಾರ್ ಢಿಕ್ಕಿ ಹೊಡೆಸಿ ಕೊಲೆ; ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ನತದೃಷ್ಟ ಯುವತಿ ಬಲಿ

- Advertisement -G L Acharya panikkar
- Advertisement -

ಹಾಸನ: ಪ್ರೀತಿಗೆ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಹಾಸನ ನಗರದ ಬೊಮ್ಮನಾಯಕನಹಳ್ಳಿ ನಿವಾಸಿ ಜಿ.ಆರ್.ಭರತ್ ಬಂಧಿತ ಆರೋಪಿಯಾಗಿದ್ದು, ನಗರದ ಬಡಾವಣೆ ಠಾಣೆಯ ಪೊಲೀಸರರು ಬಂಧಿಸಿದ್ದಾರೆ.

ನಗರದ ಸಮೀಪ ಬೂವನಹಳ್ಳಿ ಕ್ರಾಸ್ ಬಳಿ ಇರುವ ಭಾರತಿ ಅಸೋಸಿಯೇಟ್ ಮುಂಭಾಗದ ಬಿ.ಎಂ. ರಸ್ತೆಯ ಬಳಿ ಯುವತಿ ಶರಣ್ಯ ಎಂಬುವವರು ಕೆಲಸಕ್ಕೆಂದು ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಭರತ್ ಪ್ರೀತಿಸುವಂತೆ ಯುವತಿಗೆ ಪ್ರತಿದಿನ ಹಿಂಸೆ ನೀಡುತ್ತಿದ್ದ.

ಬಳಿಕ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಶರಣ್ಯಳನ್ನು ಕೊಲೆ ಮಾಡಲು ಹೊಂಚು ಹಾಕಿದ್ದ ಆರೋಪಿ ಭರತ್, ಆಗಸ್ಟ್ 3ರಂದು ಆಕೆ ನಡೆದುಕೊಂಡು ಹೋಗುವ ದಾರಿಯಲ್ಲಿ ಕಾದು ಕುಳಿತು ಕಾರು ಹರಿಸಿ ಪರಾರಿಯಾಗಿದ್ದ ಎಂದು ತಿಳಿಸಿದ್ದಾರೆ. ಪ್ರೀತಿಗೆ ವಿರೋಧ ಮಾಡಿದ್ದರಿಂದ ಕೊಲೆ ಮಾಡುವ ಉದ್ದೇಶದಿಂದಲೇ ಭರತ್ ಮೈಸೂರಿನಿಂದ ಮಾರುತಿ ಸುಜಕಿ ಕಾರನ್ನು ಬಾಡಿಗೆ ಪಡೆದುಕೊಂಡು ಬಂದಿದ್ದ ಎಂದು ತಿಳಿಸಿದರು.

ತೀವ್ರ ಗಾಯಗೊಂಡಿದ್ದ ಶರಣ್ಯಳನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಸೇರಿಸಿದರೂ ಚಿಕಿತ್ಸೆ ಫಲಿಸದೇ ಒಂದು ದಿನಗಳ ನಂತರ ಮೃತಪಟ್ಟಿದ್ದರು. ಈಕೆಯ ಸಹೋದರ ನೀಡಿದ ದೂರಿನ ಮೇರೆಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು. ಸದ್ಯ ಆರೋಪಿಯನ್ನು ಸಕಲೇಶಪುರ ಬಸ್ ನಿಲ್ದಾಣದ ಬಳಿ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯಾಂಶ ಹೊರಬಂದಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!