Saturday, May 4, 2024
spot_imgspot_img
spot_imgspot_img

ಫಾಜಿಲ್ ಹತ್ಯೆ ಆರೋಪಿಗಳನ್ನು “ಹೀರೊಗಳು” ಎಂದು ಪೋಸ್ಟ್; ಪ್ರಕರಣ ದಾಖಲು

- Advertisement -G L Acharya panikkar
- Advertisement -

ಉಡುಪಿ: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಬೈಂದೂರಿನ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಕಾಂತ್ ಬೈಂದೂರು ಎಂಬ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ. ಈತ ಪೇಸ್ ಬುಕ್ ಖಾತೆಯಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹೀರೋ ಎಂದು ಬಿಂಬಿಸಿ ಪ್ರಚೋದನ ಶೀರ್ಷಿಕೆ ನೀಡಿ ಪೋಸ್ಟ್ ಮಾಡಿದ್ದರು.

ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿನ್ನಲೆ ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಲಕ್ಷ್ಮೀಕಾಂತ್ ವಿರುದ್ದ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!